Sunday, July 08, 2018

ತೂಗುಮಂಚ


ತೂಗುಮಂಚದಲ್ಲಿ ಕೂತು, ಮೇಘಶ್ಯಾಮ ರಾಧೆಗಾತು...
ರಚನೆ: ಎಚ್.ಎಸ್.ವೆಂಕಟೇಶ್ ಮೂರ್ತಿ
ಸಂಗೀತ: ಸಿ.ಅಶ್ವಥ್
ಮೂಲ ಗಾಯನ: ರತ್ನಮಾಲಾ ಪ್ರಕಾಶ್
ತೂಗುಮಂಚದಲ್ಲಿ ಕೂತು ಮೇಘಶ್ಯಾಮ ರಾಧೆಗಾತು
ಆಡುತಿಹನು ಏನೋ ಮಾತು ರಾಧೆ ನಾಚುತಿದ್ದಳು
ಸೆರಗ ಬೆರಳಿನಲ್ಲಿ ಸುತ್ತಿ, ಜಡೆಯ ತುದಿಯ ಕೆನ್ನೆಗೊತ್ತಿ
ಜುಮ್ಮುಗುಡುವ ಮುಖವನೆತ್ತಿ ಕಣ್ಣ ಮುಚ್ಚುತಿದ್ದಳು
ಮುಖವ ಎದೆಯ ನಡುವೆ ಒತ್ತಿ, ತೋಳಿನಿಂದ ಕೊರಳ ಸುತ್ತಿ
ತುಟಿಯು ತೀಡಿ ಬೆಂಕಿ ಹೊತ್ತಿ, ಹಮ್ಮನುಸಿರ ಬಿಟ್ಟಳು
ಸೆರಗು ಜಾರುತಿರಲು ಕೆಳಗೆ, ಬಾನು ಭೂಮಿ ಮೇಲು ಕೆಳಗೆ
ಅದುರುತಿರುವ ಅಧರಗಳಿಗೆ ಬೆಳ್ಳಿ ಹಾಲ ಬಟ್ಟಲು
ಚಾಚುತಿರಲು ಅರಳಿಗರಳು, ಯಮುನೆಯೆಡೆಗೆ ಚಂದ್ರ ಬರಲು
ಮೇಲೆ ತಾರೆಗಣ್ಣ ಹೊರಳು ಹಾಯಿದೋಣಿ ತೇಲಿತು
ತನಗೆ ತಾನೆ ತೂಗುಮಂಚ ತಾಗುತಿತ್ತು ದೂರದಂಚ
ತೆಗೆಯೋ ಗರುಡ ನಿನ್ನ ಚುಂಚ ಹಾಲುಗಡಿಗೆ ಹೇಳಿತು

0 Comments:

Post a Comment

<< Home